01/04/2026
ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೈ ಬಿಡುವ ಪ್ರಕ್ರಿಯೆ ನಿಲ್ಲಿಸಲು ಆಗ್ರಹಿಸಿ ಧಾರವಾಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟ ಹೋರಾಟ ನಡೆಯುತ್ತಿದ್ದು, ನೆನ್ನೆ ಪ್ರತಿಭಟನಾ ಸ್ಥಳಕ್ಕೆ ಬಂದು ಮಾತನಾಡಿದ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಕೋವಿಡ್ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ನೆನೆದು ಸೆಲ್ಯೂಟ್ ಮಾಡಿದರು.
ಧಾರವಾಡ ಜಿಲ್ಲೆಯ ಆಶಾ ಕಾರ್ಯಕರ್ತೆಯರನ್ನು ಜನಸಂಖ್ಯೆ ಕಾರಣಕ್ಕೆ (Rationalisation of ASHAs) ಕೆಲಸದಿಂದ ವಜಾಗೊಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಅಭಯ ಹಸ್ತ ನೀಡಿದರು.
AIUTUC ಮುಖಂಡರಾದ ಕಾ. ಗಂಗಾಧರ್ ಬಡಿಗೇರ್ ಮತ್ತು ಕಾ. ಭುವನ ಹೋರಾಟದ ನೇತೃತ್ವ ವಹಿಸಿದ್ದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ