18/08/2026
ಮೈಸೂರು ಜಿಲ್ಲಾ ಮಟ್ಟದ ಪ್ರೇರಣಾ ಶಿಬಿರ ಉದ್ಘಾಟನೆ
ದಿನಾಂಕ 18-08-2026, ಮಂಗಳವಾರ ರಂದು ಮೈಸೂರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಮೈಸೂರು ವತಿಯಿಂದ ಆಯೋಜಿಸಲಾಗಿದ್ದ ಮೈಸೂರು ಜಿಲ್ಲಾ ಮಟ್ಟದ ಪ್ರೇರಣಾ ಶಿಬಿರವನ್ನು ಮಾನ್ಯ ರಾಜ್ಯ ಮುಖ್ಯ ಆಯುಕ್ತರು ಹಾಗೂ ಮಾಜಿ ಸಚಿವರಾದ ಡಾ. ಪಿ.ಜಿ.ಆರ್. ಸಿಂಧ್ಯಾ ಅವರು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯ ಉದ್ದೇಶ, ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು, ಸೇವಾ ಮನೋಭಾವ ಹಾಗೂ ದೇಶಭಕ್ತಿಯನ್ನು ಬೆಳೆಸುವಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಸಮಾನತೆ ಸ್ಕೌಟಿಂಗ್ನ ಮಹತ್ವದ ಕುರಿತು ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಪಿ. ವಿಶ್ವನಾಥ್, ಡಾ. ಭಾಮಿ ಶೆಣೈ, ಸಹಾಯಕ ರಾಜ್ಯ ಆಯುಕ್ತರಾದ ಶ್ರೀ ಬಿ.ಕೆ. ಬಸವರಾಜ್, ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಪುಷ್ಪವಲ್ಲಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಸ್ಕೌಟ್–ಗೈಡ್ ನಾಯಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಶಿಬಿರವು ಭಾಗವಹಿಸಿದವರಿಗೆ ಸ್ಫೂರ್ತಿ, ಮಾರ್ಗದರ್ಶನ ಹಾಗೂ ಸ್ಕೌಟಿಂಗ್ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಲು ಪ್ರೇರಣೆ ನೀಡಿತು.