22/09/2023
ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ನೆರೆ ರಾಜ್ಯಕ್ಕೆ ಮತ್ತಷ್ಟು ನೀರು ನಿರಂತರವಾಗಿ ಬಿಡುತ್ತಿರುವುದು ಖಂಡನೀಯ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಇರುವ ಕಾರಣ ಹಾಗೂ ಮಳೆ ಬರುವ ಸೂಚನೆ ಇರದ ಕಾರಣ, ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ.