22/02/2026
ಗದುಗಿನ ಕೆ. ಹೆಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ ಕನ್ನಡ ಬಳಗ ಆಯೋಜಿಸಿದ್ದ ಹಾಸ್ಯ ಸಂಜೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ಹಾಸ್ಯ ಕಲಾವಿದರಾದ ಶ್ರೀ ರಾಘವೇಂದ್ರ ಆಚಾರ್ಯ ಅವರು ಆಗಮಿಸಿದ್ದರು. ಇನ್ನೋರ್ವ ಅತಿಥಿಗಳಾಗಿ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಡಾ. ಸುರೇಶ ವಿ. ನಾಡಗೌಡರ ಸರ್ ಅವರು ಆಗಮಿಸಿದ್ದರು. ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಡಾ. ಬಸವರಾಜ ಬೊಮ್ಮನಹಳ್ಳಿ ಅವರು, ವೈದ್ಯಕೀಯ ಅಧೀಕ್ಷಕರಾದ ಡಾ. ರೇಖಾ ಸೋನಾವನೆ ಅವರು, ಕನ್ನಡ ಬಳಗದ ಕಾರ್ಯಾಧ್ಯಕ್ಷರಾದ ಡಾ. ಶಂಭು ಪುರದ ಅವರು, ಉಪಾಧ್ಯಕ್ಷರಾದ ಡಾ. ಶಕುಂತಲಾ ಅರಮನಿ ಅವರು, ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಕು. ರೋಹನ, ಕು. ಅಪೂರ್ವ, ಕನ್ನಡ ಬಳಗದ ಪ್ರಧಾನ ಕಾರ್ಯದರ್ಶಿಗಳಾದ ಕು. ಪ್ರಮೋದ, ಕು. ಅರ್ಚನಾ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. 💛❤️