03/05/2026
*ವಿವಿಧ ವಿಭಾಗದ ಕಾರ್ಮಿಕ ನೌಕರರ ಸಂಘಟನೆಗಳು ಹಾಗೂ ಜನಪರ ಸಂಘಟನೆಗಳು ಒಟ್ಟು ಸೇರಿ ರಚಿಸಿದ ಮೇ ದಿನ ಆಚರಣಾ ಸಮಿತಿಯ ಆಶ್ರಯದಲ್ಲಿ ಮಂಗಳೂರಿನಲ್ಲಿ ಮೇ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು. ಪ್ರಾರಂಭದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ವೃತ್ತದಿಂದ ಹೊರಟ ಕಾರ್ಮಿಕರ ಆಕರ್ಷಕ ಮೆರವಣಿಗೆಯು ಕ್ಲಾಕ್ ಟವರ್ ಬಳಿಯಲ್ಲಿರುವ NGO ಹಾಲ್ ನಲ್ಲಿ ಸಮಾಪನಗೊಂಡಿತು. ಬಳಿಕ ನಡೆದ ಬಹಿರಂಗ ಸಭೆಯಲ್ಲಿ CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಜಿಲ್ಲೆಯ ಹಿರಿಯ ಕಾರ್ಮಿಕ ಮುಖಂಡರಾದ ಜೆ ಬಾಲಕೃಷ್ಣ ಶೆಟ್ಟಿ, ಬ್ಯಾಂಕ್ ನೌಕರರ ಮುಖಂಡರಾದ ಸುನಿಲ್ ರಾಜ್ ರವರು ಮಾತನಾಡಿದರು.SSLC ಹಾಗೂ PUCಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿವಿಧ ವಿಭಾಗದ ಕಾರ್ಮಿಕರ ಮಕ್ಕಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವೇದಿಕೆಯಲ್ಲಿ ಜಯಂತಿ ಶೆಟ್ಟಿ, ರವಿಚಂದ್ರ ಕೊಂಚಾಡಿ, ಶಶಿಧರ್ ಶಕ್ತಿನಗರ,ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಕರಿಯ ಕೆ, ಮುಂತಾದವರು ಉಪಸ್ಥಿತರಿದ್ದರು.*